ADVERTISEMENT

VIDEO| ಮೋದಿ ಇದ್ದ ಕಾರ್ಯಕ್ರಮದಲ್ಲಿ 'ಜೈ ಶ್ರೀರಾಮ್‌' ಘೋಷಣೆ: ಮಾತನಾಡಲು ನಿರಾಕರಿಸಿದ ಮಮತಾ ಬ್ಯಾನರ್ಜಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 13:37 IST
Last Updated 23 ಜನವರಿ 2021, 13:37 IST

ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.

ಪ್ರಧಾನಿ ಮೋದಿ ಸಮ್ಮುಖದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಮತಾ ಅವರಿಗೆ ಭಾಷಣ ಮಾಡಲು ಆಹ್ವಾನಿಸಲಾಯಿತು. ಆ ಸಮಯದಲ್ಲಿ 'ಜೈ ಶ್ರೀರಾಮ್‌' ಎಂಬ ಘೋಷಣೆಗಳು ಕೇಳಿಬಂದವು. ಇದಕ್ಕೆ ಆಕ್ರೋಶಗೊಂಡ ಮಮತಾ, 'ಇದು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದೊಂದು ಸರ್ಕಾರಿ ಕಾರ್ಯಕ್ರಮ. ಇದಕ್ಕೊಂದು ಘನತೆ ಇರಬೇಕು. ಆಹ್ವಾನಿಸುವುದು ಮತ್ತು ಅವಮಾನಿಸುವುದು ಯಾರಿಗೂ ಇಷ್ಟವಾಗುವುದಿಲ್ಲ. ನಾನು ಮಾತನಾಡುವುದಿಲ್ಲ. ಜೈ ಬಂಗಾಳ, ಜೈ ಹಿಂದ್' ಎಂದು ತಮ್ಮ ಭಾಷಣವನ್ನು ನಿಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT