ADVERTISEMENT

ನಂದಿಗ್ರಾಮದಲ್ಲಿ ಮಮತಾ ಸೋಲು: ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ವಿಚಾರಣೆ

ಪಿಟಿಐ
Published 18 ಜೂನ್ 2021, 1:33 IST
Last Updated 18 ಜೂನ್ 2021, 1:33 IST
ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ 
ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ    

ಕೋಲ್ಕತ್ತ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವನ್ನು ಪ್ರಶ್ಸಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.

‘ನ್ಯಾಯಮೂರ್ತಿ ಕೌಶಿಕ್‌ ಚಂದ ಅವರಿರುವ ನ್ಯಾಯಪೀಠ, ಶುಕ್ರವಾರ (ಜೂನ್‌ 18) ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ’ ಎಂದು ಹೈಕೋರ್ಟ್‌ ವೆಬ್‌ಸೈಟ್‌ನಲ್ಲಿ ಗುರುವಾರ ಪ್ರಕಟಿಸಲಾಗಿದೆ.

‘ಇವಿಎಂಗಳ ದುರ್ಬಳಕೆ ಮಾಡಲಾಗಿದೆ. ಮತಗಳ ಮರು ಎಣಿಕೆ ಮಾಡಬೇಕು ಎಂಬ ನನ್ನ ಮನವಿಯನ್ನು ಚುನಾವಣಾ ಆಯೋಗವು ತಿರಸ್ಕರಿಸಿದೆ’ ಎಂದು ಮಮತಾ ಬ್ಯಾನರ್ಜಿ ಅವರು ಅರ್ಜಿಯಲ್ಲಿ ದೂರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.