ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಯಲ್ಲಿ ಸಂಭಾವ್ಯ ಮೈತ್ರಿ ಬಗ್ಗೆ ಊಹಾಪೋಹ ಎದ್ದಿರುವ ನಡುವೆಯೇ ಆರ್ಜೆಡಿ ನಾಯಕತೇಜಸ್ವಿಯಾದವ್ಅವರು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಸೋಮವಾರ ಭೇಟಿ ಮಾಡಿದರು.
ಟಿಎಂಸಿ ಹಿರಿಯ ನಾಯಕ ಹಾಗೂ ಸಚಿವ ಫಿರ್ಹಾದ್ ಹಕೀಮ್ ಅವರು ಸಭೆಯಲ್ಲಿ ಇದ್ದರು.
ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಬಿಹಾರಿಗರು ಮಮತಾ ಅವರನ್ನು ಬೆಂಬಲಿಸ ಬೇಕು ಎಂದುತೇಜಸ್ವಿಮನವಿ ಮಾಡಿದರು. ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆಗೆ ಅವರು ನೇರವಾದ ಉತ್ತರ ನೀಡಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.