ಕೋಲ್ಕತ್ತ: ಕೋವಿಡ್– 19 ಪಿಡುಗು ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಕರೆದಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಮಮತಾ ಬ್ಯಾನರ್ಜಿಯವರ ಬದಲಿಗೆ ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದ್ಯೋಪಾಧ್ಯಾಯ ಅವರು ಸಭೆಗೆ ಹಾಜರಾಗಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕೋವಿಡ್| ಮಹಾರಾಷ್ಟ್ರದಲ್ಲಿ ಗಂಭೀರ ಸ್ಥಿತಿ, ಕೇಂದ್ರದಿಂದ ನೆರವಿನ ಭರವಸೆ: ಪವಾರ್
ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಂಡಿರುವ ಕಾರಣ ಈ ಸಭೆಗೆ ಹಾಜರಾಗುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.