ADVERTISEMENT

ಅಜಿತ್‌ ಡೋಭಾಲ್‌ ನಿವಾಸಕ್ಕೆ ನುಗ್ಗಲು ಯತ್ನಿಸಿದ ಬೆಂಗಳೂರು ಮೂಲದ ವ್ಯಕ್ತಿ ಬಂಧನ

ಪಿಟಿಐ
Published 16 ಫೆಬ್ರುವರಿ 2022, 12:09 IST
Last Updated 16 ಫೆಬ್ರುವರಿ 2022, 12:09 IST
ಅಜಿತ್‌ ಡೋಭಾಲ್‌
ಅಜಿತ್‌ ಡೋಭಾಲ್‌    

ನಹದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ)ಅಜಿತ್‌ ಡೋಭಾಲ್‌ ಅವರ ದೆಹಲಿ ನಿವಾಸಕ್ಕೆ ನುಗ್ಗಲು ಯತ್ನಿಸಿದ ಆರೋ‍ಪದ ಮೇಲೆಬೆಂಗಳೂರು ಮೂಲದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಬುಧವಾರ ಬಂಧಿಸಿದೆ.

ಅಜಿತ್‌ ಡೋಭಾಲ್‌ ಮನೆಯಲ್ಲಿ ಇರುವಾಗಲೇ ಬೆಳಿಗ್ಗೆ 7.30ರ ವೇಳೆಗೆ ಈ ಘಟನೆ ನಡೆದಿದ್ದು, ಕಾರು ಚಲಾಯಿಸಿಕೊಂಡು ನಿವಾಸದ ಆವರಣ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್‌ಎಫ್‌ ಯೋಧರು ಬಂಧಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದರು.

ಬಂಧಿತ ವ್ಯಕ್ತಿಯನ್ನು ಶಾಂತನು ರೆಡ್ಡಿ ಎಂದು ಗುರುತಿಸಲಾಗಿದೆ. ಆತ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಯಂತೆ ಕಾಣುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜಿತ್‌ ಡೋಭಾಲ್‌ ಅವರಿಗೆ ಝಡ್‌ ಫ್ಲಸ್‌ ಭದ್ರತೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.