ADVERTISEMENT

ಕಸ ಎಸೆಯುವ ವಿಷಯಕ್ಕೆ ಉಂಟಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

ಪಿಟಿಐ
Published 23 ಜನವರಿ 2024, 16:02 IST
Last Updated 23 ಜನವರಿ 2024, 16:02 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬುಡೌನ್: ಕಸ ಎಸೆಯುವ ವಿಷಯಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ, ಪಕ್ಕದ ಮನೆಯ 60 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ವಜೀರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

‘ಘೀಮರ್‌ಪುರ್‌ ಗ್ರಾಮದಲ್ಲಿ ಕಸದ ವಿಷಯಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರಿಗೆ ಜಗಳ ನಡೆದಿದೆ. ರಮಾನಂದ ಎಂಬುವವರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂದಿಸಲಾಗಿದೆ’ ಎಂದು ಉತ್ತರ ಪ್ರದೇಶದ ವಜೀರ್‌ಗಂಜ್ ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಮೃತ ರಮಾನಂದ ಹಾಗೂ ಅವರ ಕುಟುಂಬದವರನ್ನು ಮನೆಯಿಂದ ಹೊರಕ್ಕೆ ಎಳೆದುತಂದು ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ರಮಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ರಮಾನಂದ ಅವರ ಪಕ್ಕದ ಮನೆಗೆ ಸೇರಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.

‘ಪ್ರಕರಣ ಕುರಿತು ಎಫ್‌ಐಆರ್ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.