ADVERTISEMENT

ಗುಂಪು ಥಳಿತ: ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿ ಸಾವು

ಪಿಟಿಐ
Published 8 ಸೆಪ್ಟೆಂಬರ್ 2020, 17:15 IST
Last Updated 8 ಸೆಪ್ಟೆಂಬರ್ 2020, 17:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖನೌ: ತನ್ನ 16 ವರ್ಷದ ಮಗಳನ್ನು ಮಾರಾಟ ಮಾಡಲು ಮುಂದಾಗಿದ್ದಾನೆ ಎಂಬ ಆರೋಪದಡಿ ವ್ಯಕ್ತಿಯೊಬ್ಬನನ್ನುಕೆಲವರು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಸುರ್ವೇಶ್ ಕುಮಾರ್‌ ದಿವಾಕರ್‌(45) ಎಂಬ ದಲಿತ ವ್ಯಕ್ತಿಯ ಮೇಲೆ ಐದುಮಂದಿಯ ಗುಂಪೊಂದು ಭಾನುವಾರ ದಾಳಿ ನಡೆಸಿದ್ದು, ಆತನನ್ನು ದೊಣ್ಣೆ ಮತ್ತು ಕಬ್ಬಿಣದ ಸರಳಿನಿಂದ ಮನಬಂದಂತೆ ಥಳಿಸಿತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಈ ಪ್ರಕರಣ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.

ಬಿಜೆಪಿ ಸರ್ಕಾರವುದಲಿತ ವ್ಯಕ್ತಿಗೆ ನ್ಯಾಯವನ್ನು ಒದಗಿಸಬೇಕು ಎಂದು ವಿಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಬಿಎಸ್‌ಪಿ ಆಗ್ರಹಿಸಿದೆ.

ADVERTISEMENT

‘ಬಿಜೆಪಿ ಆಡಳಿತದಲ್ಲಿ ದಲಿತ ಜನಾಂಗಕ್ಕೆ ವ್ಯಕ್ತಿಯನ್ನು ಬಜರಂಗದಳದ ಗೂಂಡಾಗಳು ಥಳಿಸಿದ್ದಾರೆ. ಇದುನಿಜಕ್ಕೂ ದುರದೃಷ್ಟಕರ. ಸಮಾಜವಾದಿ ಪಕ್ಷದಿಂದ ಸರ್ವೇಶ್‌ ಕುಟುಂಬದವರಿಗೆ ₹1 ಲಕ್ಷ ಸಹಾಯಧನ ನೀಡಲಿದ್ದೇವೆ. ಸರ್ಕಾರ ಕೂಡ ಅವರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಧನ ಘೋಷಿಸಬೇಕು’ ಎಂದು ಸಮಾಜವಾದಿ ಪಕ್ಷ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.