ADVERTISEMENT

ಸ್ವರ್ಣ ಮಂದಿರ ಅಪವಿತ್ರಗೊಳಿಸಿದ ಆರೋಪ: ಉದ್ರಿಕ್ತ ಗುಂಪಿನಿಂದ ವ್ಯಕ್ತಿಯ ಕೊಲೆ

ಪಿಟಿಐ
Published 19 ಡಿಸೆಂಬರ್ 2021, 8:17 IST
Last Updated 19 ಡಿಸೆಂಬರ್ 2021, 8:17 IST
ಸ್ವರ್ಣ ಮಂದಿರ
ಸ್ವರ್ಣ ಮಂದಿರ   

ಚಂಡೀಗಡ: ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದಲ್ಲಿ ಕೋಪೋದ್ರಿಕ್ತ ಗುಂಪು ಓರ್ವ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ವರದಿಯಾಗಿದೆ.

ಶನಿವಾರ ಸಂಜೆ ಪ್ರಾರ್ಥನೆಯ ಸಂದರ್ಭದಲ್ಲಿ ಗರ್ಭಗುಡಿಯೊಳಗೆ ಜಿಗಿದ ವ್ಯಕ್ತಿ ಖಡ್ಗವನ್ನು ಹಿಡಿದು ಸಿಖ್ ಧರ್ಮಗುರುಗಳು ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರ ಗ್ರಂಥ) ಪಠಿಸುತ್ತಿದ್ದ ಸ್ಥಳದ ಸಮೀಪಕ್ಕೆ ತಲುಪಿದ್ದರು.

ಈ ವೇಳೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಕಾರ್ಯಪಡೆಯ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಕೋಪೋದ್ರಿಕ್ತ ಗುಂಪು ಕೊಠಡಿಗೆ ಕರೆದೊಯ್ದು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಆತ ಮೃತಪಟ್ಟಿದ್ದಾನೆ. ಘಟನೆಯ ವಿಡಿಯೊ ಕೂಡ ವೈರಲ್ ಆಗಿದೆ.

ADVERTISEMENT

ಉತ್ತರ ಪ್ರದೇಶದ ಮೂಲದ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ಪಿ.ಎಸ್. ಭಂಡಾಲ್ ತಿಳಿಸಿದ್ದಾರೆ. ಎಲ್ಲ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ನಿಗೂಢ ಉದ್ದೇಶ ಇಟ್ಟುಕೊಂಡಿದ್ದಾರೆಯೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ವರ್ಣ ಮಂದಿರದ ಘಟನೆ ದುರದೃಷ್ಟಕರ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಪ್ರತಿಕ್ರಿಯಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.