ADVERTISEMENT

ಚಾಕು ಹಿಡಿದು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಕಾಂಗ್ರೆಸ್ ವೇದಿಕೆಗೆ ಏರಿದ ವ್ಯಕ್ತಿ

ಪಿಟಿಐ
Published 8 ಜನವರಿ 2022, 11:30 IST
Last Updated 8 ಜನವರಿ 2022, 11:30 IST
ಚಾಕು ಹಿಡಿದು ಕಾಂಗ್ರೆಸ್ ವೇದಿಕೆಗೆ ಏರಿದ ವ್ಯಕ್ತಿಯ ಬಂಧನ
ಚಾಕು ಹಿಡಿದು ಕಾಂಗ್ರೆಸ್ ವೇದಿಕೆಗೆ ಏರಿದ ವ್ಯಕ್ತಿಯ ಬಂಧನ   

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕಾಂಗ್ರೆಸ್ ಮುಖಂಡ ಹರೀಶ್ ರಾವತ್ ಭಾಗವಹಿಸಿದ್ದಕಾರ್ಯಕ್ರಮದಲ್ಲಿ ಚಾಕು ಹಿಡಿದ ವ್ಯಕ್ತಿಯೊಬ್ಬ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ವೇದಿಕೆಗೆ ಏರಿದ ಘಟನೆ ವರದಿಯಾಗಿದೆ.

ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶೀಪುರದಲ್ಲಿ ಘಟನೆ ನಡೆದಿದ್ದು, ಬಳಿಕ ವ್ಯಕ್ತಿಯನ್ನು ಬಂಧಿಸಲಾಗಿದೆ.

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾಷಣ ಮುಗಿಸಿದ ಕೆಲವೇ ನಿಮಿಷಗಳಲ್ಲಿ ಚಾಕು ಹಿಡಿದ ವ್ಯಕ್ತಿ ವೇದಿಕೆಗೆ ಏರಿ ಜೈ ಶ್ರೀರಾಮ್ ಘೋಷಣೆ ಕೂಗಲಾರಂಭಿಸಿದನು. ಕೂಡಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಆತನನ್ನು ಹಿಡಿದು, ಪೊಲೀಸ್ ವಶಕ್ಕೆ ಒಪ್ಪಿಸಿದರು.

ADVERTISEMENT

ಆ ವ್ಯಕ್ತಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ಎಂದು ಕಾಶೀಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಮೋಹನ್ ಸಿಂಗ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರಧಾನಿ ಅವರೊಂದಿಗೆ ಮಾತನಾಡಬೇಕೆಂದು ಹೇಳಿ ನಗರದಲ್ಲಿ ಟವರ್ ಮೇಲೆ ಏರಿದ್ದನು ಎಂದು ತಿಳಿಸಿದ್ದಾರೆ.

40ರ ಹರೆಯದ ವ್ಯಕ್ತಿಯ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಹರೀಶ್ ರಾವತ್ ಅವರಲ್ಲಿ ಈ ಕುರಿತು ಕೇಳಿದಾಗ, ತಾವು ಕೂಡ ಗದ್ದಲವನ್ನು ಆಲಿಸಿರುವುದಾಗಿ ತಿಳಿಸಿದ್ದಾರೆ. ಆದರೆ ಬೇರೆ ಕಾರ್ಯಕ್ರಮಕ್ಕೆ ತೆರಳಬೇಕಾಗಿದ್ದರಿಂದ ಅದನ್ನು ನಿರ್ಲಕ್ಷಿಸಿರುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.