ADVERTISEMENT

ಸಾರ್ವಜನಿಕ ಶೌಚಾಲಯ ಬಳಸಿ, ಹಣ ಕೇಳಿದ್ದಕ್ಕೆ ಸಿಬ್ಬಂದಿಯನ್ನೇ ಕೊಲೆ ಮಾಡಿದ!

ಶೌಚಾಲಯ ಬಳಸಿದ್ದಕ್ಕೆ ಹಣ ಕೊಡಲು ನಿರಾಕರಣೆ, ಸಿಬ್ಬಂದಿ ಮೇಲೆಯೇ ಹಲ್ಲೆ: ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2022, 1:56 IST
Last Updated 16 ಡಿಸೆಂಬರ್ 2022, 1:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಸಾರ್ವಜನಿಕ ಶೌಚಾಲಯ ಬಳಕೆ ಮಾಡಿ, ಹಣ ಪಾವತಿ ಮಾಡು ಎಂದಿದ್ದಕ್ಕೆ ವ್ಯಕ್ತಿಯೊಬ್ಬ, ಶೌಚಾಲಯ ನೋಡಿಕೊಳ್ಳುವ ಸಿಬ್ಬಂದಿಯನ್ನೇ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.

ಕೇಂದ್ರ ಮುಂಬೈ ದಾದರ್‌ನ ಬಸ್ ನಿಲ್ದಾಣದ ಮುಂಭಾಗದಲ್ಲಿ ಇರುವ ಸಾರ್ವಜನಿಕ ಶೌಚಾಲಯದ ಆವರಣದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಆರೋಪಿ ರಾಹುಲ್‌ ಪವಾರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಶೌಚಾಲಯ ಬಳಕೆ ಮಾಡಿದ ಬಳಿಕ ಆರೋ‍ಪಿಯು, ಹಣ ಪಾವತಿ ಮಾಡದೆ ತೆರಳಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಶೌಚಾಲಯ ಸಿಬ್ಬಂದಿ ವಿಶ್ವಜೀತ್‌, ರಾಹುಲ್‌ನನ್ನು ತಡೆದಿದ್ದಾರೆ.

ಹಣ ಪಾವತಿ ಸಂಬಂಧ, ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಆರೋಪಿ ರಾಹುಲ್‌ ಚಾಕು ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ವಿಶ್ವಜೀತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಾತುಂಗಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.