ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳ ಜೊತೆಸಭೆ ನಡೆಸುತ್ತಿದ್ದ ಕಚೇರಿ ಎದುರಿನ ರಸ್ತೆ ಮಧ್ಯದಲ್ಲೇ ನಮಾಜ್ ಮಾಡಿದ ಮುಸ್ಲಿಂ ನಾಯಕನೊಬ್ಬ, ಸಂಚಾರ ದಟ್ಟಣೆ ಸೃಷ್ಟಿಸಿದ ಪ್ರಸಂಗ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.
ಸ್ಕೂಟಿಯಲ್ಲಿ ಬಂದ ಆತ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾನೆ.ಇದರಿಂದಾಗಿ ಅತಿಗಣ್ಯ ವ್ಯಕ್ತಿಗಳು ಸಂಚರಿಸುವ ರಸ್ತೆಯಲ್ಲಿ ನೂರಾರು ವಾಹನಗಳು ಕೆಲಕಾಲ ಸಂಚಾರ ದಟ್ಟಣೆಗೆ ಸಿಲುಕಿವೆ.
ಈ ದೃಶ್ಯಾವಳಿಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ವ್ಯಕ್ತಿಯು ಸೊಂಟದಲ್ಲಿ ಚಾಕು ಇಟ್ಟುಕೊಂಡಿರುವುದೂ ದಾಖಲಾಗಿದೆ.ಪ್ರಕರಣಕ್ಕೆ ಕಾರಣವಾದ ವ್ಯಕ್ತಿಯನ್ನು ರಫೀಕ್ ಅಹ್ಮದ್ ಎನ್ನಲಾಗಿದ್ದು, ಶನಿವಾರ ಆತನನ್ನು ಬಂಧಿಸಲಾಗಿದೆ.
ಅತಿಗಣ್ಯ ವ್ಯಕ್ತಿಗಳು ಸಂಚರಿಸುವ ರಸ್ತೆಯಲ್ಲಿ ಇಂತಹ ಪ್ರಕರಣ ವರದಿಯಾಗಿರುವುದುಭದ್ರತಾ ವ್ಯವಸ್ಥೆಯನ್ನು ಪ್ರಶ್ನೆಮಾಡಿದೆ. ಈ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ರಫೀಕ್ ಕೃತ್ಯವನ್ನು ಮುಸ್ಲಿಂ ನಾಯಕ ಖಲೀದ್ ರಶೀದ್ ಖಂಡಿಸಿದ್ದು, ಆತನನ್ನು ಮಾನಸಿಕ ಅಸ್ವಸ್ಥ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.