ನವದೆಹಲಿ:‘ನೀರಿನ ಮೋಟಾರ್ ಕದಿಯಲು ಯತ್ನಿಸಿದ 22 ವರ್ಷದ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ, ಹತ್ಯೆಗೈದಿರುವ ಘಟನೆ ವಾಯವ್ಯ ದೆಹಲಿಯ ಅಮನ್ ವಿಹಾರದಲ್ಲಿ ನಡೆದಿದೆ’ ಎಂದು ಪೊಲೀಸರು ಸೋಮವಾರ ತಿಳಿಸಿದರು.
‘ಸಂತ್ರಸ್ತನನ್ನು ಪ್ರೇಮ್ ನಗರದ ನಿವಾಸಿ ಸಲ್ಮಾನ್ ಎಂದು ಗುರುತಿಸಲಾಗಿದೆ’ ಎಂದು ಅವರು ಹೇಳಿದರು.
‘ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಸಲ್ಮಾನ್ ಹೋತಿಲಾಲ್ ಎಂಬುವವರ ಅಂಗಡಿಗೆ ತೆರಳಿದ್ದ. ಈ ವೇಳೆ ಅಂಗಡಿಯಿಂದ ನೀರಿನ ಮೋಟಾರ್ ಅನ್ನು ಕದಿಯಲು ಪ್ರಯತ್ನಿಸಿದ್ದಾನೆ. ಇದನ್ನು ಗಮನಿಸಿದ ಹೋತಿಲಾಲ್, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿದ ಸಲ್ಮಾನ್ನನ್ನು ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆತ ಸಾವಿಗೀಡಾಗಿದ್ದಾನೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
‘ಈ ಸಂಬಂಧ ಹೋತಿಲಾಲ್ನನ್ನು ಬಂಧಿಸಲಾಗಿದ್ದು, ವಿಚಾರಣೆಯನ್ನು ಮುಂದುವರಿಸಲಾಗಿದೆ’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.