ನವದೆಹಲಿ: ‘ಸುಪ್ರೀಂಕೋರ್ಟ್ನ ಹೊರಗೆ ಇಬ್ಬರು ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು.
‘ನ್ಯಾಯಾಲಯದ ಹೊರಗೆ ಮಹಿಳೆ ಮತ್ತು ಪುರುಷರೊಬ್ಬರು ಮೈಮೇಲೆ ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡಿದ್ದಾರೆ. ಇದನ್ನು ಗಮನಿಸಿದ ನ್ಯಾಯಾಲಯದ ಪೊಲೀಸ್ ಪಡೆ ಕೂಡಲೇ ಅವರಿಬ್ಬರಿಗೆ ಕಂಬಳಿ ಸುತ್ತಿ, ಬೆಂಕಿಯನ್ನು ನಂದಿಸಿದೆ. ಬಳಿಕ ಅವರನ್ನು ರಾಮ್ ಮನೋಹರ್ ಲೊಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು’ ಎಂದು ನವದೆಹಲಿಯ ಪೊಲೀಸ್ ಉಪ ಆಯುಕ್ತ ದೀಪಕ್ ಯಾದವ್ ಅವರು ಮಾಹಿತಿ ನೀಡಿದರು.
‘ಈ ಕೃತ್ಯದ ಹಿಂದಿನ ಕಾರಣವೇನೆಂಬುದು ತಿಳಿದಿಲ್ಲ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.