ADVERTISEMENT

ಕುಕಿ – ಕೇಂದ್ರದ ಮಧ್ಯೆ ಒಪ್ಪಂದ ಮಹತ್ವದ ಹೆಜ್ಜೆ: ಮೈತೇಯಿ ಸಂಘಟನೆ

ಪಿಟಿಐ
Published 6 ಸೆಪ್ಟೆಂಬರ್ 2025, 14:29 IST
Last Updated 6 ಸೆಪ್ಟೆಂಬರ್ 2025, 14:29 IST
<div class="paragraphs"><p>ಮಣಿಪುರದಲ್ಲಿ ಭದ್ರತಾ ಸಿಬ್ಬಂದಿ (ಸಂಗ್ರಹ ಚಿತ್ರ)&nbsp;</p></div>

ಮಣಿಪುರದಲ್ಲಿ ಭದ್ರತಾ ಸಿಬ್ಬಂದಿ (ಸಂಗ್ರಹ ಚಿತ್ರ) 

   

–ಪಿಟಿಐ ಚಿತ್ರ

ಇಂಫಾಲ್‌: ಮಣಿಪುರದಲ್ಲಿ ಕುಕಿ–ಜೊ ಗುಂಪುಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಒಪ್ಪಂದ ಏರ್ಪಟ್ಟಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪನೆ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಹೆಜ್ಜೆ ಎಂದು ಮೈತೇಯಿ ಸಂಘಟನೆ ಅರಂಬಾಯ್‌ ತೆಂಗ್‌ಗೋಲ್‌ ಶನಿವಾರ ಅಭಿಪ್ರಾಯಪಟ್ಟಿದೆ.

ADVERTISEMENT

ಈ ವಿಷಯದಲ್ಲಿ ಕೇಂದ್ರ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಅದು ಹೇಳಿಕೆಯಲ್ಲಿ ತಿಳಿಸಿದೆ.

ಮ್ಯಾನ್ಮಾರ್‌ನಿಂದ ಬರುವ ಅಕ್ರಮ ವಲಸಿಗರು ಮತ್ತು ನಿರಾಶ್ರಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅದು ಆಗ್ರಹಿಸಿದೆ.

ಮಣಿಪುರದಲ್ಲಿ 2023ರಿಂದ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಸುಮಾರು 260 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.