ADVERTISEMENT

ರಾಜ್ಯಸಭೆ ಚುನಾವಣೆ ರಾಜಸ್ಥಾನದಿಂದ ಸಿಂಗ್‌ ಕಣಕ್ಕೆ, ಇಂದು ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2019, 2:01 IST
Last Updated 13 ಆಗಸ್ಟ್ 2019, 2:01 IST
ಮನಮೋಹನ್‌ ಸಿಂಗ್
ಮನಮೋಹನ್‌ ಸಿಂಗ್   

ಜೈಪುರ: ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಇದೇ ತಿಂಗಳ 26ರಂದು ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಇಂದು(ಮಂಗಳವಾರ) ನಾಮಪತ್ರ ಸಲ್ಲಿಸಲಿದ್ದಾರೆ.

‘ಸಿಂಗ್‌ ಅವರನ್ನು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಮಾಡಿ ಕಳುಹಿಸಲು ಪಕ್ಷ ನಿರ್ಧರಿಸಿದೆ’ ಎಂದು ಉಪಮುಖ್ಯ ಮಂತ್ರಿಯೂ ಆದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಚಿನ್‌ ಪೈಲಟ್‌ ಸೋಮವಾರ ತಿಳಿಸಿದ್ದಾರೆ.

ಬಿಜೆಪಿಯಿಂದ ಆಯ್ಕೆಯಾಗಿದ್ದ ಮದನ್‌ ಲಾಲ್ ಸೈನಿ ಅವರು ಜೂನ್‌ನಲ್ಲಿ ನಿಧನರಾಗಿದ್ದರಿಂದ ಒಂದು ಸ್ಥಾನ ಖಾಲಿ ಇದೆ. ಆ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.