ನವದೆಹಲಿ:ದೆಹಲಿಯ ಅಲಿಪುರ್ ಪ್ರದೇಶದಲ್ಲಿ ನಿರ್ಮಾಣ ಹಂತದ ಗೋದಾಮಿನ ಗೋಡೆ ಕುಸಿದು ಶುಕ್ರವಾರ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮಧ್ಯಾಹ್ನ ಸುಮಾರು 12.40ರ ವೇಳೆಗೆ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆರಂಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸುಮಾರು 20 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.
ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. 13 ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಐವರು ಮೃತಪಟ್ಟಿದ್ದಾರೆ.
ಶಕ್ತಿ ಸಿಂಗ್ ಎಂಬುವವರ ಒಡೆತನಕ್ಕೆ ಸೇರಿದ ಗೋದಾಮು ಇದಾಗಿದ್ದು, ಗುತ್ತಿಗೆದಾರನನ್ನು ಸಿಕಂದರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.