ADVERTISEMENT

ಭಾರತದ ಹೆಚ್ಚಿನ ಮುಸ್ಲಿಂ ನಾಯಕರು ತಾಲಿಬಾನ್‌ ಬೆಂಬಲಿಸುತ್ತಿದ್ದಾರೆ: ತಸ್ಲಿಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಆಗಸ್ಟ್ 2021, 16:14 IST
Last Updated 25 ಆಗಸ್ಟ್ 2021, 16:14 IST
ಲೇಖಕಿ ತಸ್ಲೀಮಾ ನಸ್ರೀನ್‌
ಲೇಖಕಿ ತಸ್ಲೀಮಾ ನಸ್ರೀನ್‌   

ಬೆಂಗಳೂರು: ಭಾರತದ ಹೆಚ್ಚಿನ ಮುಸ್ಲಿಂ ನಾಯಕರು ಅಫ್ಗಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಬಾಂಗ್ಲಾ ಮೂಲದ ಲೇಖಕಿ ತಸ್ಲಿಮಾ ನಸ್ರೀನ್‌ ಗಂಭೀರ ಆರೋಪ ಮಾಡಿದ್ದಾರೆ.

'ಆಫ್ಗನ್‌ನಲ್ಲಿ ತಾಲಿಬಾನ್‌ ಅನ್ನು ಬೆಂಬಲಿಸುವವರು ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತತೆಯನ್ನು ಯಾಕೆ ಬಯಸುತ್ತಾರೆ ಎಂಬದು ಅಚ್ಚರಿಯಾಗಿದೆ. ಅದೇ ನಾಯಕರು ಮುಸ್ಲಿಂ ರಾಷ್ಟ್ರಗಳಲ್ಲಿ ಥಿಯೋಕ್ರೆಟಿಕ್‌ (ಧರ್ಮ ಮತ್ತು ದೇವರ ಹೆಸರಲ್ಲಿ ನಿಯಮಗಳ ಹೇರಿಕೆ ) ಮತ್ತು ಜಾತ್ಯಾತೀತವಲ್ಲದ ಆಡಳಿತವನ್ನು ಬೆಂಬಲಿಸುತ್ತಾರೆ' ಎಂದು ತಸ್ಲಿಮಾ ನಸ್ರೀನ್‌ ಕಿಡಿಕಾರಿದ್ದಾರೆ.

'ಭಾರತದಲ್ಲಿ ದೇವಬಂದಿಗಳು ಉಗ್ರಕೃತ್ಯದಲ್ಲಿ ಭಾಗಿಯಾಗಿಲ್ಲ. ಆದರೆ ಭಾರತದ ಹೊರಗಿನ ಕೆಲವು ಉಗ್ರ ಸಂಘಟನೆಗಳು ದೇವಬಂದಿ ಸಿದ್ಧಾಂತದಿಂದ ಆಕರ್ಷಿತಗೊಂಡಿವೆ' ಎಂದು ತಸ್ಲಿಮಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

ADVERTISEMENT

ದೇವಬಂದಿ ಎಂಬುದು ಸುನ್ನಿ ಪಂಥದೊಳಗೆ ಆರಂಭಗೊಂಡ ಇಸ್ಲಾಂ ಪುನಶ್ಚೇತನ ಆಂದೋಲನವಾಗಿದೆ. ಇದು 19ನೇ ಶತಮಾನದಲ್ಲಿ ದಾರುಲ್‌ ಉಲೂಮ್‌ ಇಸ್ಲಾಮಿಕ್‌ ಸೆಮಿನರಿ ಆಧಾರದಲ್ಲಿ ಉತ್ತರ ಪ್ರದೇಶದ ಶಹಾರನ್‌ಪುರದ ದೇವಬಂದ ಎಂಬಲ್ಲಿ ಆರಂಭಗೊಂಡ ಆಂದೋಲನವಾಗಿದೆ.

'ಸ್ತ್ರೀದ್ವೇಷಿ ತಾಲಿಬಾನಿಯರನ್ನು ಶ್ಲಾಘಿಸುವ ಮೊದಲು ಆಫ್ಗನ್‌ ಮಹಿಳೆಯರ ಸ್ಥಾನದಲ್ಲಿ ನಿಮ್ಮನ್ನು ಊಹಿಸಿಕೊಳ್ಳಿ' ಎಂದು ತಸ್ಲಿಮಾ ನಸ್ರೀನ್‌ ಮತ್ತೊಂದು ಟ್ವೀಟ್‌ನಲ್ಲಿ ಮಾರ್ಮಿಕವಾಗಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.