ಡೆಹ್ರಾಡೂನ್: ಉತ್ತರಾಖಂಡದಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆ ಕೈಗೊಂಡಿರುವ ಯಾತ್ರಾರ್ಥಿಗಳ ಪೈಕಿ ಈವರೆಗೆ 57 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮೌಂಟೇನ್ ಸಿಕ್ನೆಸ್ ತೊಂದರೆಗಳು ಇಂತಹ ಸಾವಿಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 3ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಈವರೆಗೆ 57 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸೇವೆಗಳ ನಿರ್ದೇಶನಾಲಯದ ಡಾ. ಶೈಲಜಾ ಭಟ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.