ಶ್ರೀನಗರ: ಇಲ್ಲಿನ ದಲ್ಗೇಟ್ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ 19 ಪ್ರವಾಸಿಗರು ಸೇರಿ 39 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶ್ರೀನಗರದ ಶ್ರೀಮಹಾರಾಜ ಹರಿಸಿಂಗ್ (ಎಸ್ಎಂಎಚ್ಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.
ದಲ್ಗೇಟ್ನ ಘಾಟ್ ನಂ.5ರ ಬುಚ್ವಾರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಕಾಶ್ಮೀರದಲ್ಲಿ ಕೃತಕ ಸಹಜ ಪರಿಸ್ಥಿತಿ: ಒಮರ್ ಅಬ್ದುಲ್ಲಾ
‘ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ’ ಎಂದು ಎಸ್ಎಂಎಚ್ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕನ್ವಾಲ್ಜೀತ್ ಸಿಂಗ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.