ADVERTISEMENT

ಮರಾಠಾ ಮೀಸಲಾತಿ ಆಂದೋಲನ: HC ಸೂಚನೆಯಂತೆ ನೋಟಿಸ್; ಮಾತುಕತೆಗೆ ಸಿದ್ಧ ಎಂದ ಜರಾಂಗೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 5:24 IST
Last Updated 2 ಸೆಪ್ಟೆಂಬರ್ 2025, 5:24 IST
<div class="paragraphs"><p>ಮುಂಬೈನಲ್ಲಿ ಅನಿ‌ರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮನೋಜ್ ಜರಾಂಗೆ ಅವರಿಗೆ ನ್ಯಾಯಾಲಯದ ಆದೇಶ ಓದಿ ಹೇಳುತ್ತಿರುವ ಸಹ ಹೋರಾಟಗಾರ</p></div>

ಮುಂಬೈನಲ್ಲಿ ಅನಿ‌ರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮನೋಜ್ ಜರಾಂಗೆ ಅವರಿಗೆ ನ್ಯಾಯಾಲಯದ ಆದೇಶ ಓದಿ ಹೇಳುತ್ತಿರುವ ಸಹ ಹೋರಾಟಗಾರ

   

ಪಿಟಿಐ ಚಿತ್ರ

ಮುಂಬೈ: ಮರಾಠಾ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕಳೆದ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮನೋಜ್ ಜರಾಂಗೆ ಅವರು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧ ಎಂದಿದ್ದಾರೆ.

ADVERTISEMENT

ನಗರದ ಆಜಾದ್‌ ಮೈದಾನದಲ್ಲಿ ಐದು ದಿನಗಳಿಂದ ಜರಾಂಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಹೀಗಾಗಿ ಅವರ ಅಪಾರ ಬೆಂಬಲಿಗರು ನಗರದಲ್ಲಿ ಬೀಡು ಬಿಟ್ಟಿದ್ದಾರೆ. ಮೀಸಲಾತಿ ಆಂದೋಲನದಿಂದಾಗಿ ಇಡೀ ಮುಂಬೈ ನಗರ ಸ್ತಬ್ಧಗೊಂಡಿದೆ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿತ್ತು. 

ಜರಾಂಗೆ ಅವರ ಪ್ರತಿಭಟನೆಯು ಶಾಂತಿಯುತವಾಗಿಲ್ಲ ಮತ್ತು ಅವರ ಆಂದೋಲನವು ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಿದೆ ಎಂದೂ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಮುಂಬೈನಲ್ಲಿ ಸಹಜ ಸ್ಥಿತಿ ಮರುಸ್ಥಾಪನೆಯಾಗಬೇಕು ಎಂದು ಹೈಕೋರ್ಟ್ ಹೇಳಿದ್ದು ಇಂದು (ಸೆ. 2) ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸುವಂತೆ ಮತ್ತು ಎಲ್ಲಾ ಬೀದಿಗಳನ್ನು ತೆರವುಗೊಳಿಸುವಂತೆ ಜರಾಂಗೆ ಮತ್ತು ಅವರ ಬೆಂಬಲಿಗರಿಗೆ ಸೂಚನೆ ನೀಡಿದೆ.

ಹೈಕೋರ್ಟ್‌ನ ನಿರ್ದೇಶನದ ಬೆನ್ನಲ್ಲೇ ಆಜಾದ್ ಮೈದಾನವನ್ನು ಖಾಲಿ ಮಾಡುವಂತೆ ಮನೋಜ್ ಜರಾಂಗೆಗೆ ಮುಂಬೈ ಪೊಲೀಸರು ಇಂದು (ಮಂಗಳವಾರ) ನೋಟಿಸ್ ಜಾರಿಗೊಳಿಸಿದ್ದಾರೆ.

‘ಸಿಎಂ ಫಡಣವೀಸ್‌ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುತ್ತಿದ್ದಾರೆ’ ಎಂದು ಜರಾಂಗೆ ಸೋಮವಾರ ಆರೋಪಿಸಿದ್ದರು. ಜತೆಗೆ ಸೋಮವಾರದಿಂದ ನೀರು ಕುಡಿಯುವುದನ್ನೂ ನಿಲ್ಲಿಸಿದ್ದರು.

ಮುಂಬೈನಲ್ಲಿ ಜನರಿಗೆ ತೊಂದರೆಯಾಗದಂತೆ ನಡೆದುಕೊಳ್ಳುವಂತೆ ಮರಾಠಾ ಹೋರಾಟಗಾರರಿಗೆ ಜರಾಂಗೆ ಸಲಹೆ ನೀಡಿದರು. ಅಲ್ಲದೇ ಆಗಸ್ಟ್‌ 29ರಿಂದ ಇಲ್ಲಿಯವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರು ಬೆಂಬಲಿಗರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.