ಠಾಣೆ: ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮರಾಠಿ ಭಾಷೆಯಲ್ಲಿರುವ ಈ ಪೋಸ್ಟ್ ಅನ್ನು ಚಿತಳೆ ಅವರು ಶುಕ್ರವಾರ ಹಂಚಿಕೊಂಡಿದ್ದರು. ಪವಾರ್ ಹೆಸರನ್ನು ನಮೂದಿಸಿರುವ ಚಿತಳೆ ‘ನಿಮಗೆ ನರಕ ಕಾಯುತ್ತಿದೆ’ ಎಂದು ಬರೆಯಲಾಗಿದೆ. ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ’ ಎಂದೂ ಆರೋಪಿಸಲಾಗಿದೆ.
ಶಿವಸೇನೆ ಮತ್ತು ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಹಂಚಿಕೊಂಡಿರುವ ಪವಾರ್ ಅವರನ್ನು ಪೋಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.
ಸ್ವಪ್ನಿಲ್ ನೆಟ್ಕೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕಲ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತಳೆ ಅವರನ್ನು ಶನಿವಾರ ಬಂಧಿಸಲಾಗಿದೆ.
ಪುಣೆಯಲ್ಲೂ ಚಿತಳೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎನ್ಸಿಪಿ ಪೊಲೀಸರಿಗೆ ಮನವಿ ಸಲ್ಲಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.