ಅಜಿತ್ ಪವಾರ್
ಮುಂಬೈ: ಮಹಾರಾಷ್ಟ್ರದಲ್ಲಿ ಹಿಂದಿ ಭಾಷೆ ಹೇರಿಕೆಯ ಗದ್ದಲದ ನಡುವೆ ಎನ್ಸಿಪಿ ಪಕ್ಷವು, 'ಮರಾಠಿ ಮಹಾರಾಷ್ಟ್ರದ ಆತ್ಮವಿದ್ದಂತೆ ಎಂದು ಬಣ್ಣಿಸಿದೆ. ಮರಾಠಿ ಭಾಷೆಯ ಸ್ಥಾನಮಾನಕ್ಕೆ ಸ್ಥಾನಮಾನಕ್ಕೆ ಧಕ್ಕೆ ತರುವ ನಿರ್ಧಾರಗಳನ್ನು ಎಂದಿಗೂ ತೆಗೆದುಕೊಳ್ಳುವುದಿಲ್ಲ' ಎಂದು ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ವಕ್ತಾರ ಆನಂದ್ ಪರಾಂಜಪೆ, ಮರಾಠಿ ಭಾಷೆಯ ಮಹತ್ವವನ್ನು ಎತ್ತಿಹಿಡಿಯಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಮೋದಿ ಸರ್ಕಾರವು ಮರಾಠಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸಿದೆ. ಮರಾಠಿ ಮಹಾರಾಷ್ಟ್ರದ ಏಕೈಕ ಭಾಷೆ ಮತ್ತು ಆತ್ಮ. ಮಹಾಯುತಿ ಸರ್ಕಾರವು ಅದರ (ಮರಾಠಿ) ಸ್ಥಾನಮಾನಕ್ಕೆ ಧಕ್ಕೆ ತರುವ ನಿರ್ಧಾರವನ್ನು ಎಂದಿಗೂ ತೆಗೆದುಕೊಳ್ಳುವುದಿಲ್ಲ ಎಂದು ಆನಂದ್ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವಾಗಿದೆ.
‘ಮರಾಠಿ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ 1ರಿಂದ 5ನೇ ತರಗತಿವರೆಗೆ ಕಡ್ಡಾಯವಾಗಿ ಕಲಿಸಬೇಕು’ ಎಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.
ಹಿಂದಿ ಕಡ್ಡಾಯವಲ್ಲ ಎಂದು ಸರ್ಕಾರ ವಾದಿಸಿದ್ದರೂ, ಹಿಂದಿ ಹೊರತುಪಡಿಸಿ ಯಾವುದೇ ಭಾರತೀಯ ಭಾಷೆಯನ್ನು ಕಲಿಯಲು ಶಾಲೆಯಲ್ಲಿ ಪ್ರತಿ ತರಗತಿಗೆ ಕನಿಷ್ಠ 20 ವಿದ್ಯಾರ್ಥಿಗಳ ಒಪ್ಪಿಗೆ ಸೂಚಿಸುವುದು ಕಡ್ಡಾಯಗೊಳಿಸಿತು.
‘ಸರ್ಕಾರದ ಕ್ರಮವನ್ನು ಖಂಡಿಸಿರುವ ಮರಾಠಿ ಭಾಷಾ ಹೋರಾಟಗಾರರು, ಹಿಂಬಾಗಿಲ ಮೂಲಕ ಸರ್ಕಾರವು ಹಿಂದಿ ಹೇರುತ್ತಿದೆ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.