ADVERTISEMENT

ಬಿಹಾರ| ಛತ್ ಪೂಜೆಗೆ ಅಡುಗೆ ಮಾಡುವಾಗ ಬೆಂಕಿ ಅವಘಡ: 25 ಮಂದಿಗೆ ಗಾಯ, ಹಲವರು ಗಂಭೀರ

ಪಿಟಿಐ
Published 29 ಅಕ್ಟೋಬರ್ 2022, 4:47 IST
Last Updated 29 ಅಕ್ಟೋಬರ್ 2022, 4:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಔರಂಗಬಾದ್‌: ಬಿಹಾರದ ಔರಂಗಬಾದ್ ಜಿಲ್ಲೆಯ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಭಾರೀ ಬೆಂಕಿ ಅನಾಹುತವಾಗಿದ್ದು, ಕನಿಷ್ಠ 25 ಜನರು ಗಾಯಗೊಂಡಿದ್ದಾರೆ. ಹಲವರು ಗಂಭೀರಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಮಾಲೀಕ ಅನಿಲ್ ಗೋಸ್ವಾಮಿ ಅವರ ಕುಟುಂಬವು ಛತ್ ಪೂಜೆಗಾಗಿ ರಾತ್ರಿ 2.30ರ ಸುಮಾರಿನಲ್ಲಿ ಅಡುಗೆ ಮಾಡುತ್ತಿದ್ದಾಗ ಈ ದುರ್ಘಟನೆಯಾಗಿದೆ ಎಂದು ಅವರು ಹೇಳಿದರು.

ಅಗ್ನಿಶಾಮಕ ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಆದರೆ ಅಡುಗೆ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಮತ್ತಷ್ಟು ವ್ಯಾಪಿಸಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿಯ ಅವಘಡಕ್ಕೆ ಕಾರಣವೇನು ಎಂಬುದರ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.