ADVERTISEMENT

ಮತಾಂತರ: ಮಾಯಾವತಿ ವಿರುದ್ಧ ಬಿಜೆಪಿ ಕಿಡಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 18:25 IST
Last Updated 15 ಅಕ್ಟೋಬರ್ 2019, 18:25 IST

ನವದೆಹಲಿ: ಸೂಕ್ತ ಸಮಯದಲ್ಲಿ ಬೌದ್ಧ ಧರ್ಮ ಸ್ವೀಕರಿಸುವುದಾಗಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ನೀಡಿರುವ ಹೇಳಿಕೆಗೆ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದೆ.

‘ಮಾಯಾವತಿ ಅವರು ಯಾವುದೇ ರೀತಿಯ ಪ್ರದರ್ಶನ ಅಥವಾ ನಾಟಕ ಮಾಡಬೇಕಾಗಿಲ್ಲ’ ಎಂದು ಬಿಜೆಪಿ ಉಪಾಧ್ಯಕ್ಷ ದುಷ್ಯಂತ್‌ ಕುಮಾರ್ ಗೌತಮ್‌ ಹೇಳಿದ್ದಾರೆ.

‘ಬೌದ್ಧ ಧರ್ಮಕ್ಕೆ ಮತಾಂತರ ಹೊಂದಲು ಸೂಕ್ತ ಸಮಯಕ್ಕೆ ಮಾಯಾವತಿ ಅವರು ಕಾಯಬೇಕಾಗಿಲ್ಲ. ಹಲವರು ಬೌದ್ಧ ಧರ್ಮವನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ, ಇಂತಹ ನಾಟಕಗಳನ್ನು ಮಾಡಬೇಕಾಗಿಲ್ಲ. ಈ ಧರ್ಮದಲ್ಲಿ ಹಲವು ಉತ್ತಮ ಸಂಗತಿಗಳಿವೆ. ಅಂಬೇಡ್ಕರ್‌ ಅವರು ಸಹ ಮತಾಂತರ ಹೊಂದಿದ್ದರು’ ಎಂದು ಹೇಳಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಯಾವತಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.