ADVERTISEMENT

ಕಾಂಗ್ರೆಸ್‌ನದ್ದು ಜಾತಿವಾದಿ ಮನಸ್ಥಿತಿ; ಅದರೊಟ್ಟಿಗೆ ಮೈತ್ರಿಯಿಲ್ಲ: ಮಾಯಾವತಿ

ಏಜೆನ್ಸೀಸ್
Published 12 ಮಾರ್ಚ್ 2019, 10:54 IST
Last Updated 12 ಮಾರ್ಚ್ 2019, 10:54 IST
ಮಾಯಾವತಿ
ಮಾಯಾವತಿ   

ಲಖನೌ: ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು(ಬಿಎಸ್‌ಪಿ) ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲಎಂದು ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಯಾವುದೇ ರಾಜ್ಯಗಳಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಸಾಧ್ಯವಿಲ್ಲ ಎಂದಿರುವ ಮಾಯಾವತಿ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಏಕಾಂಗಿ ಹೋರಾಟ ನಡೆಸುವ ಪಣ ತೊಟ್ಟಿದ್ದಾರೆ.

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಯಾವತಿ, ಬಿಜೆಪಿಯನ್ನು ಮಟ್ಟಹಾಕಲು ಈಗಾಗಲೇ ಹಲವು ಕಸರತ್ತುಗಳನ್ನು ನಡೆಸುತ್ತಿರುವ ಕಾಂಗ್ರೆಸ್, ಬಿಎಸ್‌ಪಿಯನ್ನು ಸಹ ನಾಶಪಡಿಸಲು ಹೊಂಚು ಹಾಕಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಕಾಂಗ್ರೆಸ್‌ನದ್ದು ಜಾತಿವಾದಿ ಮನಸ್ಥಿತಿ. ಕೆಲವು ಪಕ್ಷದ ಮುಖಂಡರಿಗೂ ಅವರೊಟ್ಟಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿಯಿಲ್ಲ. ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿದ್ದು, ಇದರಲ್ಲಿ ಕೇವಲ 15 ರಿಂದ 20 ಸ್ಥಾನ, ಇನ್ನು ಚತ್ತೀಸಗಡದಲ್ಲಿ 90 ಸ್ಥಾನಗಳ ಪೈಕಿ 5 ಸ್ಥಾನಗಳನ್ನಷ್ಟೇ ಬಿಎಸ್‌ಪಿಗೆ ನೀಡುವ ಇಂಗಿತವನ್ನು ಕಾಂಗ್ರೆಸ್‌ ಹೊಂದಿದೆ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

ಅಲ್ಲದೆ ದುರಹಂಕಾರದ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸುವ ಭ್ರಮೆಯಲ್ಲಿದೆ. ಆದರೆ, ಇದು ಈ ಹಿಂದೆ ಮಾಡಿರುವ ತಪ್ಪುಗಳನ್ನು, ಭ್ರಷ್ಟಾಚಾರವನ್ನು ಜನರುಮರೆತಿಲ್ಲ ಎಂಬುದು ವಾಸ್ತವದ ಸಂಗತಿ. ಅಲ್ಲದೆ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ನಡೆಯಲು ಅದು ತಯಾರಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.