ADVERTISEMENT

ಬಿಎಸ್‌ಪಿ: ಸಂಬಂಧಿಕರಿಗೆ ಪ್ರಮುಖ ಹುದ್ದೆ ನೀಡಿದ ಮಾಯಾವತಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2019, 14:43 IST
Last Updated 23 ಜೂನ್ 2019, 14:43 IST
ಮಾಯಾವತಿ
ಮಾಯಾವತಿ   

ಲಖನೌ :‌ ಬಿಎಸ್‌ಪಿ ಪಕ್ಷದ ಪ್ರಮುಖ ಹುದ್ದೆಗಳಿಗೆ ತಮ್ಮ ಸಂಬಂಧಿಕರನ್ನು ನೇಮಕ ಮಾಡಿರುವ ಪಕ್ಷದಮುಖ್ಯಸ್ಥೆ ಮಾಯಾವತಿ,ಲೋಕಸಭೆಯ ನಾಯಕರನ್ನಾಗಿ ಡ್ಯಾನಿಷ್ ಅಲಿ ಅವರನ್ನು ಆಯ್ಕೆ ಮಾಡಿದ್ದಾರೆ.

‍ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಸಹೋದರ ಆನಂದ್‌ಕುಮಾರ್‌ ಹಾಗೂ ರಾಷ್ಟ್ರೀಯ ಸಂಚಾಲರನ್ನಾಗಿ ಸೋದರ ಸಂಬಂಧಿ ಆಕಾಶ್‌ ಕುಮಾರ್ ಅವರನ್ನು ಭಾನುವಾರ ನೇಮಕ ಮಾಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ.

ಅಮೋರಾ ಸಂಸದ ಡ್ಯಾನಿಷ್‌ ಅಲಿ ಅವರನ್ನು ಲೋಕಸಭೆಯ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ನಗಿನಾ ಮೀಸಲು ಕ್ಷೇತ್ರದ ಸಂಸದ ಗಿರೀಶ್‌ ಚಂದ್ರ ಅವರನ್ನು ಮುಖ್ಯಸಚೇತರನ್ನಾಗಿ ನೇಮಕ ಮಾಡಲಾಗಿದೆ.

ADVERTISEMENT

ಲಖನೌದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಯಿಸಲು ನಿರಾಕರಿಸಿದ ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ, ಇದು ಬಿಎಸ್‌ಪಿ ಆಂತರಿಕ ವಿಷಯ ಎಂದಿದ್ದಾರೆ.

ಅದೇ ವೇಳೆ ಮಾಯಾವತಿಯವರುಪಕ್ಷದಲ್ಲಿ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದ ಬಿಜೆಪಿ ವಕ್ತಾರ ಶಲಬ್ ಮಣಿ ತ್ರಿಪಾಠಿ, ಪ್ರಧಾನ ಹುದ್ದೆಗಳನ್ನು ದಲಿತ ನಾಯಕರಿಗೆ ಅಥವಾ ಕಾರ್ಯಕರ್ತರಿಗೆ ನೀಡದೆ ಅವರು ಸಹೋದರ ಮತ್ತು ಸಂಬಂಧಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.ಅವರು ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿರುವ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ದಾರಿ ತುಳಿಯುತ್ತಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.