ADVERTISEMENT

ರೈತರ ಸಮಾವೇಶದಲ್ಲಿ ಹಿಂದೂ–ಮುಸ್ಲಿಂ ಏಕತೆಗೆ ಪ್ರಯತ್ನ: ಮಾಯಾವತಿ ಮೆಚ್ಚುಗೆ

ಪಿಟಿಐ
Published 6 ಸೆಪ್ಟೆಂಬರ್ 2021, 7:55 IST
Last Updated 6 ಸೆಪ್ಟೆಂಬರ್ 2021, 7:55 IST
ಮಾಯಾವತಿ
ಮಾಯಾವತಿ   

ಲಖನೌ: ಮುಜಾಫರ್‌ನಗರದಲ್ಲಿ ಭಾನುವಾರ ನಡೆದ ಬೃಹತ್‌ ರೈತ ಮಹಾ ಪಂಚಾಯಿತಿಯಲ್ಲಿ ಹಿಂದೂ–ಮುಸ್ಲಿಂ ಏಕತೆಗಾಗಿ ಘೋಷಣೆಗಳನ್ನು ಹಾಕಿರುವುದನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸ್ವಾಗತಿಸಿದ್ದಾರೆ.

ಇದರಿಂದ, 2013ರಲ್ಲಿ ಈ ಜಿಲ್ಲೆಯಲ್ಲಿ ಸಂಭವಿಸಿದ ಹಿಂಸಾಚಾರದ ಕಹಿ ಘಟನೆಯನ್ನು ಮರೆಯಲು ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರಿಗೆ ಇಂತಹ ಘೋಷಣೆಗಳನ್ನು ಸಹಿಸಿಕೊಳ್ಳಲು ಸಾಧ್ಯವಾಗದೆಯೇ ಇರಬಹುದು. ಆದರೆ, ರೈತರ ಸಮಾವೇಶದ ಮೂಲಕವೂ ಕೋಮು ಸೌಹಾರ್ದತೆ ಮೂಡಿಸುವ ಪ್ರಯತ್ನಗಳನ್ನು ಕೈಗೊಳ್ಳಲಾಗಿದೆ. ಇದರಿಂದ, ಬಿಜೆಪಿಯು ದ್ವೇಷದ ಮೂಲಕ ಬಿತ್ತಿರುವ ರಾಜಕೀಯ ನೆಲೆ ಅಳಿಯಲಿದೆ ಎಂದು ಹೇಳಿದ್ದಾರೆ.

ADVERTISEMENT

2013ರಲ್ಲಿ ಮುಜಫ್ಫರನಗರದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ 63 ಮಂದಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.