ADVERTISEMENT

ರೈತರ ರ‍್ಯಾಲಿ ವೇಳೆ ನಡೆದ ಹಿಂಸಾಚಾರ ‘ದುರದೃಷ್ಟಕರ’: ಮಾಯಾವತಿ

ಪಿಟಿಐ
Published 27 ಜನವರಿ 2021, 5:38 IST
Last Updated 27 ಜನವರಿ 2021, 5:38 IST
ಮಾಯಾವತಿ
ಮಾಯಾವತಿ   

ಲಖನೌ: ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನದಂದು ರೈತರ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ನಡೆದ ಹಿಂಸಾಚಾರವನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ‘ದುರದೃಷ್ಟಕರ’ ಎಂದು ಕರೆದಿದ್ದಾರೆ.

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಈ ಕೂಡಲೇ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮೂಲಕ, ದೀರ್ಘ ಕಾಲದಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಕ್ತಾಯಗೊಳಿಸಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ದೆಹಲಿಯಲ್ಲಿ ಮಂಗಳವಾರ ರೈತರ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ನಡೆದ ಹಿಂಸಾಚಾರವು ಮುಂದೆಂದಿಗೂ ನಡೆಯಬಾರದು. ಈ ರೀತಿಯ ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.