ಸೇಲಂ: ವೈದ್ಯಕೀಯ ಶಿಕ್ಷಣ ಆಕಾಂಕ್ಷಿಯಾಗಿದ್ದ 19 ವರ್ಷದ ಯುವಕ ಧನುಷ್, ಮೂರನೇ ಬಾರಿಗೆ ‘ನೀಟ್’ ಪರೀಕ್ಷೆಗೆ ಹಾಜರಾಗುವ ಮೊದಲೇ ಮೆಟ್ಟೂರು ಸಮೀಪದ ಕೂಜಾಹೈಯುರುವಿನ ತನ್ನ ನಿವಾಸದಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರೀಕ್ಷೆ ಆರಂಭಕ್ಕೂ ಕೆಲವೇ ಗಂಟೆ ಮೊದಲು ಈ ಪ್ರಕರಣ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಮೊದಲು ಗುರುತಿಸಿದ ಯುವಕನ ತಾಯಿ ಈ ಬಗ್ಗೆ ಮಾಹಿತಿ ನೀಡಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. ಕೃತ್ಯಕ್ಕೂ ಮುನ್ನ ಪತ್ರ ಬರೆದಿಟ್ಟಿದ್ದಾರೆಯೇ ಎಂಬ ಪ್ರಶ್ನೆಗೆ ನಿರ್ದಿಷ್ಟ ಉತ್ತರ ನೀಡದ ಅವರು, ‘ನೀಟ್ ಪರೀಕ್ಷೆಗೆ ಮೂರನೇ ಬಾರಿಗೆ ಹಾಜರಾಗಬೇಕಿತ್ತು. ಕಳೆದೆರಡು ಬಾರಿ ವಿಫಲರಾಗಿದ್ದರು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.