ಹೈದರಾಬಾದ್: ‘ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರ ಮೃತದೇಹವು ನಿಜಾಮಾಬಾದ್ ಜಿಲ್ಲೆಯಲ್ಲಿರುವ ಹಾಸ್ಟಲ್ವೊಂದರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದರು.
‘22 ವರ್ಷದ ವಿದ್ಯಾರ್ಥಿಯು ತೆಲಂಗಾಣದ ಪೆದ್ದಪಳ್ಳಿ ಜಿಲ್ಲೆಯವರಾಗಿದ್ದು, ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿಯು ಹಾಸ್ಟೆಲ್ ಕೊಠಡಿಯ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿದ್ದದ್ದನ್ನು ಕೆಲವು ವಿದ್ಯಾರ್ಥಿಗಳು ಮೊದಲು ನೋಡಿದ್ದಾರೆ. ನಂತರ ಪೊಲೀಸರಿಗೆ ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆ ನಂತರವೇ ತಿಳಿಯಲಿದೆ’ ಎಂದು ತಿಳಿಸಿದರು.
‘ಮಧ್ಯಾಹ್ನ 3ರ ಹೊತ್ತಿಗೆ ವಿದ್ಯಾರ್ಥಿಯು ತನ್ನ ಪೋಷಕರಿಗೆ ಹಾಗೂ ಸಹೋದರನಿಗೆ ಸಂದೇಶ ಕಳುಹಿಸಿದ್ದು, ‘ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ’ ಎಂದು ಹೇಳಿದ್ದಾರೆ’ ಎಂದು ಹೇಳಿದರು.
ವಾರಂಗಲ್ ಜಿಲ್ಲೆಯ ಮೆಡಿಕಲ್ ವಿದ್ಯಾರ್ಥಿನಿಯೊಬ್ಬರು ಹಿರಿಯ ವಿದ್ಯಾರ್ಥಿಗಳಿಂದ ‘ಕಿರುಕುಳ’ ಅನುಭವಿಸಿ ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.