ನವದೆಹಲಿ: ಸೋಮವಾರ ರಾತ್ರಿ ಹರಿಯಾಣದ ಝಾಜ್ಜರ್ನಲ್ಲಿ 3.7 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದ ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 3.7 ರಷ್ಟು ತೀವ್ರತೆ ದಾಖಲಾಗಿದೆ. ರಾತ್ರಿ 10.36 ಕ್ಕೆ 5 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್ಸಿಎಸ್ ತಿಳಿಸಿದೆ.
ದೆಹಲಿಯಲ್ಲಿ ಜೂನ್ 20 ರಂದು 2.1 ರಷ್ಟು ತೀವ್ರತೆಯ ಲಘು ಭೂಕಂಪ ಸಂಭವಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.