ADVERTISEMENT

ಸಿಬಿಐ ನಿರ್ದೇಶಕರ ನೇಮಕ: ಮೇ 2ರ ನಂತರ ಸಭೆ –ಕೇಂದ್ರ

ಪಿಟಿಐ
Published 19 ಏಪ್ರಿಲ್ 2021, 16:27 IST
Last Updated 19 ಏಪ್ರಿಲ್ 2021, 16:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಿಬಿಐಗೆ ನಿರ್ದೇಶಕರ ನೇಮಿಸುವ ಕುರಿತ ಚರ್ಚೆಗೆ ಮೇ 2ರ ನಂತರ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕರೆಯಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸಮಿತಿ ಸದಸ್ಯರಾಗಿರುವ ಲೋಕಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ಮುಖಂಡ ಅಧೀರ್‌ ರಂಜನ್‌ ಚೌಧರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯದ ಕಾರ್ಯದರ್ಶಿ ಸಂಪರ್ಕಿಸಿದ್ದಾರೆ. ಮೇ 2ರವರೆಗೂ ನಾನು ಲಭ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ ಎಂದು ಕೇಂದ್ರ ತನ್ನ ಪ್ರಮಾಣಪತ್ರದಲ್ಲಿ ಮಾಹಿತಿ ನೀಡಿದೆ.

ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮೇ 13ಕ್ಕೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.