ADVERTISEMENT

ಶ್ರದ್ಧಾ ಮೃತದೇಹ ಕತ್ತರಿಸಲು ಬಳಸಿದ್ದ ಆಯುಧ ವಶಕ್ಕೆ

ಪಿಟಿಐ
Published 29 ನವೆಂಬರ್ 2022, 2:51 IST
Last Updated 29 ನವೆಂಬರ್ 2022, 2:51 IST
ಆಫ್ತಾಬ್‌ ಅಮಿನ್‌ ಪೂನಾವಾಲಾ
ಆಫ್ತಾಬ್‌ ಅಮಿನ್‌ ಪೂನಾವಾಲಾ   

ನವದೆಹಲಿ: ಶ್ರದ್ಧಾ ವಾಲಕರ್‌ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಆರೋಪಿ ಆಫ್ತಾಬ್‌ ಅಮಿನ್‌ ಪೂನಾವಾಲಾ ಬಳಸಿದ್ದ ಎನ್ನಲಾದ ಆಯುಧವನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಶ್ರದ್ಧಾ ಅವರ ಉಂಗುರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಉಂಗುರವನ್ನು ಪೂನಾವಾಲ ಮತ್ತೊಬ್ಬ ಮಹಿಳೆಗೆ ನೀಡಿದ್ದ ಎನ್ನಲಾಗಿದೆ. ಪೂನಾವಾಲಾ ಸುಳ್ಳುಪತ್ತೆ ಪರೀಕ್ಷೆಯು ರೋಹಿಣಿಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪೂನಾವಾಲಾ ತನ್ನ ಸಹಜೀವನ ಸಂಗಾತಿ ಶ್ರದ್ಧಾಳನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ಬಳಿಕ ಅವುಗಳನ್ನು ಫ್ರಿಜ್‌ನಲ್ಲಿಟ್ಟು ಹಲವು ದಿನಗಳ ಕಾಲ ನಗರದ ವಿವಿಧ ಭಾಗಗಳಲ್ಲಿ ಎಸೆದಿದ್ದ. ಪ್ರಕರಣ ಸಂಬಂಧ ಈತನನ್ನು ನ.12ರಂದು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.