ನವದೆಹಲಿ: ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗೆ ಅವರು ಕೆಲಸ ಮಾಡುವ ಕಚೇರಿಗಳಲ್ಲಿ ಮುಟ್ಟಿನ ರಜೆ ನೀಡಲು ನಿಯಮ ರೂಪಿಸುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಇದೇ 24ರಂದು ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಎದುರು ಈ ಅರ್ಜಿ ಕುರಿತು ಪ್ರಸ್ತಾಪಿಸಲಾಯಿತು.
ದೆಹಲಿ ನಿವಾಸಿ ಶೈಲೇಂದ್ರ ಮಣಿ ತ್ರಿಪಾಠಿ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಬ್ರಿಟನ್, ಜಪಾನ್, ಇಂಡೋನೇಷ್ಯಾ ಸೇರಿ ಹಲವಾರು ದೇಶಗಳು ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆಯನ್ನು ನೀಡಿವೆ ಎಂದು ಅವರು ಅರ್ಜಿಯಲ್ಲಿ ನಮೂದಿಸಿದ್ದರು.
ತಾಯ್ತನ ಅನುಕೂಲ ಕಾಯ್ದೆ–1961ರ ಸೆಕ್ಷನ್ 14ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಾಲನೆ ಮಾಡುವಂತೆಯೂ ಅವರು ಅರ್ಜಿಯಲ್ಲಿ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.