ADVERTISEMENT

‘ಬಿಜೆಪಿಗೆ ಬಹುಮತ ಬಾರದು’

ಪಿಟಿಐ
Published 7 ಮೇ 2019, 19:07 IST
Last Updated 7 ಮೇ 2019, 19:07 IST

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಹೇಳಿಕೆಯನ್ನು ಶಿವಸೇನಾ ಅನುಮೋದಿಸಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳನ್ನು ಅವಲಂಬಿಸುವುದು ಅನಿವಾರ್ಯ ಎಂದಿದೆ.

‘2014ರ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಕ್ಕಿತ್ತು. ಆದರೆ, ಈ ಬಾರಿ ಅಷ್ಟು ಸ್ಥಾನ ಗೆಲ್ಲುವುದು ಕಷ್ಟ’ ಎಂದುಶಿವಸೇನಾದ ಹಿರಿಯ ನಾಯಕ ಸಂಜಯ ರಾವತ್‌ ಪ್ರತಿಪಾದಿಸಿದರು.

‘ರಾಮ್‌ ಮಾಧವ್ ಹೇಳಿರುವುದು ಸರಿ. ಎನ್‌ಡಿಎ ಮುಂದಿನ ಸರ್ಕಾರ ರಚಿಸಲಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸದ್ಯದ ಸ್ಥಿತಿಯಲ್ಲಿ ಬಿಜೆಪಿ ಏಕಾಂಗಿಯಾಗಿ 280–282 ಸ್ಥಾನ ಗೆಲ್ಲುವುದು ಕಷ್ಟ. ಆದರೆ, ಎನ್‌ಡಿಎ ‘ಪರಿವಾರ’ ಈ ಗಡಿ ದಾಟಲಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಹಾಲಿ ಲೋಕಸಭೆಯಲ್ಲಿ 18 ಸಂಸದರನ್ನು ಹೊಂದಿರುವ ಶಿವಸೇನಾ, ಎನ್‌ಡಿಎಯ ಭಾಗವಾಗಿದೆ. ಅಲ್ಲದೆ, ಮಹಾರಾಷ್ಟ್ರದಲ್ಲೂ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.