ADVERTISEMENT

ಅನುಕಂಪದ ನೌಕರಿ ನೀತಿಯಲ್ಲಿ ಕೇಂದ್ರದ ಮಾರ್ಪಾಡು

ಪಿಟಿಐ
Published 12 ಜುಲೈ 2022, 14:35 IST
Last Updated 12 ಜುಲೈ 2022, 14:35 IST
   

ನವದೆಹಲಿ: ಸೇವೆಯಲ್ಲಿರುವಾಗ ಆಕಸ್ಮಿಕವಾಗಿ ಸಾವಿಗೀಡಾದ ಅಥವಾ ವೈದ್ಯಕೀಯ ಕಾರಣಗಳಿಗಾಗಿ ನಿವೃತ್ತಿ ಹೊಂದುವ ತನ್ನ ಉದ್ಯೋಗಿಗಳ ಅವಲಂಬಿತರಿಗೆ ಅನುಕಂಪದ ನೌಕರಿ ನೀಡುವ ನೀತಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ಕೆಲವು ಮಾರ್ಪಾಡುಗಳನ್ನು ಮಾಡಿದೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಉದ್ಯೋಗಿಗಳಿಗೆ ಈ ನಿಯಮವು ಅನ್ವಯವಾಗಲಿದೆ. ಈ ಹೊಸ ನೀತಿಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿದೆ.

ಗೃಹ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ‘ಆರ್ಥಿಕವಾಗಿ ಅಹಾಯಕತೆಯಿಂದ ಬಳಲುತ್ತಿರುವ ನೌಕರನ ಕುಟುಂಬಕ್ಕೆ ತುರ್ತು ನೆರವು ನೀಡಲು ಅನುಕಂಪ ಆಧಾರಿತ ನೌಕರಿ ನೀಡಲಾಗುತ್ತದೆ. ಹೊಸ ಮಾರ್ಗಸೂಚಿಗಳು ನೌಕರಿಯ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ವಸ್ತುನಿಷ್ಠತೆಯನ್ನು ಹೊಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಹೊಸ ಮಾರ್ಗಸೂಚಿಗಳು ಕುಟುಂಬದ ಆರ್ಥಿಕ ಸ್ಥಿತಿ, ಉದ್ಯೋಗ ಮಾಡುತ್ತಿರುವವರ ಸಂಖ್ಯೆ, ಕುಟುಂಬದ ಗಾತ್ರ, ಮಕ್ಕಳ ವಯಸ್ಸು ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ಅಗತ್ಯವನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವ ಅಂಶಗಳನ್ನು ಒಳಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.