ADVERTISEMENT

ಕೇರಳ | 30 ಕೆ.ಜಿ ಚಿನ್ನ ಅಕ್ರಮ ಸಾಗಣೆ, ತನಿಖೆಯ ಹೊಣೆ ಎನ್‌ಐಎಗೆ

ಪಿಟಿಐ
Published 9 ಜುಲೈ 2020, 16:38 IST
Last Updated 9 ಜುಲೈ 2020, 16:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇರಳದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿರುವ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಪ್ರಕರಣದ ಪರಿಣಾಮಕಾರಿ ತನಿಖೆಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪತ್ರ ಬರೆದ ಮರುದಿನವೇ ಈ ಬೆಳವಣಿಗೆ ನಡೆದಿದೆ.

‘ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು. ಹಾಗಾಗಿ, ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ನಡೆದಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದೆ’ ಎಂದು ಕೇಂದ್ರ ಗೃಹಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ADVERTISEMENT

ರಾಜತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದ ಬ್ಯಾಗೇಜ್ ಜೊತೆಗೆ ಸಾಗಿಸುತ್ತಿದ್ದ 30 ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು.ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಇಬ್ಬರು ವ್ಯಕ್ತಿಗಳ ಮೇಲೆ ಅನುಮಾನ ಇದ್ದು, ಅವರು ನಾಪತ್ತೆಯಾಗಿದ್ದಾರೆ.

//ಬಾಕ್ಸ್‌///

ಬಂಧಿತ ವ್ಯಕ್ತಿ ನ್ಯಾಯಾಂಗ ವಶಕ್ಕೆ

ಕೊಚ್ಚಿ: ಚಿನ್ನ ಅಕ್ರಮ ಸಾಗಾಣೆ ಪ್ರಕರಣದ ಆರೋಪದಲ್ಲಿ ಬಂಧಿಸಿರುವ ವ್ಯಕ್ತಿಯೊಬ್ಬರನ್ನು ನ್ಯಾಯಾಲಯವು ಕಸ್ಟಮ್‌ ಅಧಿಕಾರಿಗಳ ವಶಕ್ಕೆ ನೀಡಿದೆ.

ಹೆಚ್ಚುವರಿ ಮುಖ್ಯ ಜಿಲ್ಲಾ ಮ್ಯಾಜೆಸ್ಟ್ರೇಟ್ ಪ್ರಕರಣದ ವಿಚಾರಣೆ ನಡೆಸಿದರು. ತಿರುವನಂತಪುರದಲ್ಲಿರುವ ಯುಎಇ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಸರಿತ್ ಎಂಬುವವರನ್ನು ಜುಲೈ 15ರವರೆಗೆಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ವಶಕ್ಕೆ ನೀಡಲಾಗಿದೆ.

ಪ್ರಕರಣದ ಹೆಚ್ಚುವರಿ ತನಿಖೆಗೆ ಕಸ್ಟಡಿ ವಿಚಾರಣೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು. ಸರಿತ್‌ ಅವರನ್ನು ಸೋಮವಾರ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.