ನವದೆಹಲಿ:ಮಕ್ಕಳಿಗೆಸೈಬರ್ ಭದ್ರತೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸೈಬರ್ ಸುರಕ್ಷತೆ ಕುರಿತು ಮಾಹಿತಿ ನೀಡುವ ಕೈಪಿಡಿಗಳನ್ನು ಶಾಲೆಗಳಲ್ಲಿ ವಿತರಿಸುವಂತೆ ಹಲವು ಸಚಿವರಿಗೆ ಸೂಚಿಸಿದ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ರೈಲ್ವೆ, ರಕ್ಷಣೆ, ಮಾನವ ಸಂಪನ್ಮೂಲ ಇಲಾಖೆಯ ಸಚಿವರುಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿನ ಮಕ್ಕಳಿಗೆ ಕೈಪಿಡಿಗಳನ್ನು ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
13 ವರ್ಷ ವಯಸ್ಸಿನ ಮಕ್ಕಳಿಗಾಗಿ ಸೈಬರ್ ಭದ್ರತೆ ಕುರಿತ ಕೈಪಿಡಿಗಳನ್ನು ಸಚಿವಾಯಲವು ರಚಿಸಿದ್ದು, ಸೈಬರ್ ಬೆದರಿಕೆ ಹಾಗೂ ರಕ್ಷಣೆಗಳ ಕುರಿತ ಮಾಹಿತಿಯನ್ನು ಒಳಗೊಂಡಿದೆ. ಇದರಿಂದ ಸೈಬರ್ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ.
ಆತಂಕ ಸೃಷ್ಟಿಸುವಸುಳ್ಳು ಸುದ್ದಿಗಳು, ವಂಚನೆಯ ಸಂದೇಶಗಳನ್ನು ನಿರ್ವಹಿಸಲು ಕೈಪಿಡಿಯು ನೆರವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.