ಸಮಸ್ತಿಪುರ (ಬಿಹಾರ):ಬಿಹಾರದ ಸಮಸ್ತಿಪುರದ ಶಂಕರ್ ಚೌಕ್ ಬಳಿ ಬುಧವಾರ ಬೆಳಗ್ಗೆ ಟ್ರಕ್ ಒಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಮುಜಾಫರ್ಪುರದಿಂದ ಕಟಿಹಾರ್ಗೆ ತೆರಳುತ್ತಿದ್ದ ಬಸ್ ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು. ಇಂದು ಬೆಳಗಿನ ಜಾವ ಸಮಸ್ತಿಪುರದಲ್ಲಿ ಟ್ರಂಕ್ ಒಂದಕ್ಕೆ ಈ ಬಸ್ ಡಿಕ್ಕಿ ಹೊಡೆದದ್ದು, ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಧ್ಯಪ್ರದೇಶದ, ಉತ್ತರ ಪ್ರದೇಶಗಳಲ್ಲೂ ಅಪಘಾತ: ವಲಸೆ ಕಾರ್ಮಿಕರ ಸಾವು
ಬುಧವಾರ ತಡರಾತ್ರಿ ಮಧ್ಯಪ್ರದೇಶದಲ್ಲಿ ಟ್ರಕ್ ಒಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಟು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಲಾಕ್ಡೌನ್ ಹಿನ್ನೆಲೆ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆರು ಮಂದಿ ವಲಸೆ ಕಾರ್ಮಿಕರ ಮೇಲೆ ಉತ್ತರ ಪ್ರದೇಶದಲ್ಲಿ ಸರ್ಕಾರ ಬಸ್ ಹರಿದಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.