ADVERTISEMENT

ಜಮ್ಮು–ಕಾಶ್ಮೀರ: ನಾಗರಿಕರ ಕೊಲೆಯಲ್ಲಿ ಭಾಗಿಯಾಗಿದ್ದ ಉಗ್ರನ ಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 16:21 IST
Last Updated 15 ಅಕ್ಟೋಬರ್ 2021, 16:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಇತ್ತೀಚಿಗೆ ಶ್ರೀನಗರದಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನೊಬ್ಬನನ್ನು ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮದ ವಹೀಬಗ್‌ ಪ್ರದೇಶದಲ್ಲಿಯ ಕಾವಲು ಬೇಲಿ ಬಳಿ ಉಗ್ರರು ಇರುವ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದಿವೆ.

ಬಳಿಕ ಅಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆ. ಕ್ರಮೇಣ ಇದು ಎನ್‌ಕೌಂಟರ್‌ ಆಗಿ ಬದಲಾಗಿದೆ. ಈ ವೇಳೆ ಭದ್ರತಾ ಅಧಿಕಾರಿಗಳು ಹಾರಿಸಿದ ಗುಂಡಿಗೆ ಒಬ್ಬ ಉಗ್ರ ಬಲಿಯಾಗಿದ್ದಾನೆ.ಉಗ್ರನನ್ನು ಶ್ರೀನಗರದ ನಿವಾಸಿ ಶಾಹಿದ್‌ ಬಶೀರ್‌ ಶೇಖ್‌ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಎನ್‌ಕೌಂಟರ್‌ ನಡೆದ ಸ್ಥಳದಿಂದ ಒಂದು ಎಕೆ–47 ಬಂದೂಕು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

‘ಪುಲ್ವಾಮದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಶ್ರೀನಗರದಲ್ಲಿಯ ಇತ್ತೀಚಿನ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ’ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.