ADVERTISEMENT

ಬಾರಾಮುಲ್ಲಾ ಎನ್‌ಕೌಂಟರ್: ಒಬ್ಬ ಉಗ್ರ ಹತ, ಇಬ್ಬರು ಭದ್ರತಾ ಸಿಬ್ಬಂದಿ ಗಾಯ

ಪಿಟಿಐ
Published 30 ಜುಲೈ 2022, 6:22 IST
Last Updated 30 ಜುಲೈ 2022, 6:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಪ್ರದೇಶದಲ್ಲಿ ಎನ್‌ಕೌಂಟರ್ ಮುಂದುವರಿದಿದೆ.

ವಾಣಿಗಂ ಬಾಲಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವುದರ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದವು.

ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಾಗ ಅಡಗಿರುವ ಭಯೋತ್ಪಾದಕರು ಗುಂಡಿನ ದಾಳಿ ಪ್ರಾರಂಭಿಸಿದರು. ಈ ವೇಳೆ ಎನ್‌ಕೌಂಟರ್ ಭುಗಿಲೆದ್ದಿದೆ.

ಕಳೆದ ಕೆಲವು ತಿಂಗಳುಗಳಿಂದ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಸತತ ಕಾರ್ಯಾಚರಣೆಯನ್ನು ನಡೆಸುತ್ತಲೇ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.