ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ 3 ಉಗ್ರರ ಹತ್ಯೆ

ಪಿಟಿಐ
Published 21 ಜೂನ್ 2020, 11:27 IST
Last Updated 21 ಜೂನ್ 2020, 11:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಇಲ್ಲಿನ ಜೂನಿಮಾರ್‌‌ ‍ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳ ಜತೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತನಾಗಿದ್ದಾನೆ.

ನಿಖರ ಮಾಹಿತಿ ಮೇರೆಗೆ ಜೂನಿಮಾರ್‌ ಪ್ರದೇಶದಲ್ಲಿ ಶೋಧ ಕಾರ್ಯಚರಣೆಯನ್ನು ಭದ್ರತಾ ಪಡೆಗಳು ಕೈಗೊಂಡಿದ್ದವು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು. ಈ ಸಂದರ್ಭದಲ್ಲಿ ಮೂವರುಉಗ್ರರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ, ವಾಹನ ಮತ್ತು ಜನರ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.