ಶ್ರೀನಗರ (ಜಮ್ಮು ಕಾಶ್ಮೀರ): ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಎನ್ಕೌಂಟರ್ಗೆ ಬಲಿಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ನಗರದ ಹರ್ವಾನ್ ಪ್ರದೇಶದಲ್ಲಿ ಶನಿವಾರ ರಾತ್ರಿ ಎನ್ಕೌಂಟರ್ ನಡೆದಿದೆ ಎಂದು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಸ್ಪಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ನಗರದ ಹರ್ವಾನ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆಗೆ ಎನ್ಕೌಂಟರ್ ನಡೆದಿದೆಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರನ ಗುರುತು ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.