ADVERTISEMENT

ಬಳ್ಳಾರಿ ಭೇಟಿಗೆ ಜನಾರ್ದನ ರೆಡ್ಡಿಗೆ ಅನುಮತಿ

ಪಿಟಿಐ
Published 7 ಜೂನ್ 2019, 19:38 IST
Last Updated 7 ಜೂನ್ 2019, 19:38 IST
   

ನವದೆಹಲಿ: ಆರು ವರ್ಷಗಳ ನಂತರ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದೇ 8 ರಿಂದ ಎರಡು ವಾರವಷ್ಟೇ ಅವರು ಬಳ್ಳಾರಿಯಲ್ಲಿರಬಹುದು.

ಬಹುಕೋಟಿ ಹಗರಣ ಆರೋಪ ಎದುರಿಸುತ್ತಿರುವರೆಡ್ಡಿಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದಾರೆ.

‘ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ನೋಡಲು ಅನುಮತಿ ನೀಡಬೇಕು’ ಎಂದುರೆಡ್ಡಿ ಅರ್ಜಿಯಲ್ಲಿ ಮನವಿ ಮಾಡಿದ್ದರು.

ADVERTISEMENT

ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂಬ ಆದೇಶವಿದ್ದಾಗಲೂ ಆರೋಪಿಗಳ ವಿರುದ್ಧ ಆರು ವರ್ಷಗಳಲ್ಲಿ ಆರೋಪಪಟ್ಟಿ ದಾಖಲಿಸುವಲ್ಲಿ ಯಾಕೆ ವಿಳಂಬ ಮಾಡಲಾಗಿದೆ ಎಂದು ಇಂದಿರಾ ಬ್ಯಾನರ್ಜಿ ಮತ್ತು ಅಜಯ್ ರಸ್ತೋಗಿ ಅವರನ್ನು ಒಳಗೊಂಡ ರಜಾಕಾಲದ ಪೀಠ ಇದೇ ವೇಳೆ ಪ್ರಶ್ನಿಸಿದೆ.

2015ರ ಜನವರಿಯಲ್ಲಿ ರೆಡ್ಡಿಗೆ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್‌, ರಾಜ್ಯದ ಬಳ್ಳಾರಿ ಹಾಗೂ ಆಂಧ್ರಪ್ರದೇಶದಅನಂತಪುರ ಮತ್ತು ಕಡಪಾಗಳಿಗೆ ಭೇಟಿ ನೀಡುವುದಕ್ಕೆ ನಿಷೇಧ ವಿಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.