ಅಗರ್ತಲ: ಅತ್ಯಾಚಾರದ ಆರೋಪ ಮಾಡಿದ್ದ ಮಹಿಳೆಯ ಜೊತೆ ಶಾಸಕ ಧನಂಜಯ್ ತ್ರಿಪುರ ಅವರು ವಿವಾಹವಾಗಿದ್ದಾರೆ.
‘ಇಲ್ಲಿಯ ಚತುರ್ದಾಸ್ ದೇವತಾ ದೇವಸ್ಥಾನದಲ್ಲಿ ಭಾನುವಾರ ವಿವಾಹವಾಗಿದ್ದೇನೆ’ ಎಂದು ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್ಟಿ)ಪಕ್ಷದ ಶಾಸಕ ಧನಂಜಯ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
‘ವಧು, ವರನ ಕಡೆಯವರು ರಾಜಿ ಮಾಡಿಕೊಂಡಿದ್ದಾರೆ.ವಿವಾಹ ಪ್ರಮಾಣಪತ್ರ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಲಾಗಿದೆ’ ಎಂದು ಶಾಸಕರ ಪರ ವಕೀಲ ಅಮಿತ್ ತಿಳಿಸಿದ್ದಾರೆ.
‘ಶಾಸಕ ಧನಂಜಯ್ ನನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ವಿವಾಹವಾಗಲು ನಿರಾಕರಿಸುತ್ತಿದ್ದಾರೆ’ ಎಂದು ಮಹಿಳೆ ಕಳೆದ ಮೇ 20ರಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಶಾಸಕರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಜೂನ್ 1ರಂದು ತ್ರಿಪುರ ಹೈಕೋರ್ಟ್ ಶಾಸಕರಿಗೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.