ಉತ್ತರ ಪ್ರದೇಶ:ದನದ ಮಾಂಸ ಸಾಗಣೆಯಗಾಳಿಸುದ್ದಿ ಹರಡಿ,ವ್ಯಕ್ತಿಯೊಬ್ಬರ ಮೇಲೆಗ್ರೇಟರ್ ನೊಯ್ಡಾದಲ್ಲಿ ಗುಂಪೊಂದು ಹಲ್ಲೆ ನಡೆಸಿದೆ.
ಗಜಿಯಾಬಾದ್ನ ಮಹಾನಗರ ಪಾಲಿಕೆಯ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಂದ್ರ ಹಲ್ಲೆಗೊಳಗಾದವರು. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಶುಕ್ರವಾರ ರಾತ್ರಿ 9 ಗಂಟೆಯ ವೇಳೆಗೆ ಮಹೇಂದ್ರ ಅವರು, ಮೂರು ದನಗಳು, 2 ಕರು ಹಾಗೂ 12 ಎಮ್ಮೆಯ ಕರುಗಳ ಮೃತದೇಹಗಳನ್ನು ವಿಲೇವಾರಿಗಾಗಿ, ಘಟಕಕ್ಕೆ ಕೊಂಡೊಯ್ಯುತ್ತಿದ್ದರು. ಇದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳ ಒಪ್ಪಿಗೆಯನ್ನೂ ಪಡೆಯಲಾಗಿತ್ತು. ಆದರೆ ಗೌರ್ ನಗರದಲ್ಲಿ ವಾಹನವನ್ನು ಅಡ್ಡಗಟ್ಟಿದ ಕಿಡಿಗೇಡಿಗಳು, ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಅನುಮತಿ ಪಡೆದು ವಿಲೇವಾರಿ ಮಾಡುತ್ತಿದ್ದರೂ ಹಲ್ಲೆ ನಡೆಸಲಾಗಿದೆ. ಈ ಕುರಿತು ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.