ADVERTISEMENT

ಮೋದಿ–ಅದಾನಿ ಭಾಯಿ–ಭಾಯಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಫೆಬ್ರುವರಿ 2023, 9:40 IST
Last Updated 9 ಫೆಬ್ರುವರಿ 2023, 9:40 IST
   

ನವದೆಹಲಿ: ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡುತ್ತಿದ್ದಾಗ ‘ಮೋದಿ–ಅದಾನಿ ಭಾಯಿ–ಭಾಯಿ’ ಎಂಬ ಘೋಷಣೆ ಕೇಳಿ ಬಂದಿದೆ.

ಪ್ರಧಾನಿ ಮೋದಿ ಮಾತು ಆರಂಭಿಸುತ್ತಿದ್ದಂತೆ ಘೋಷಣೆ ಕೂಗಲು ಆರಂಭಿಸಿದ ವಿರೋಧ ಪಕ್ಷಗಳ ಸದಸ್ಯರು, ಸದನದ ಬಾವಿಯತ್ತ ಧಾವಿಸಿದರು.

ಇದೇವೇಳೆ, ಅದಾನಿ ವಿರುದ್ಧ ಹಿಂಡೆನ್‌ಬರ್ಗ್‌ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿರುವ ವಂಚನೆ ಮತ್ತು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳ ಸದಸ್ಯರು, ‘ವಿ ವಾಂಟ್ ಜೆಪಿಸಿ’ಎಂದು ಘೋಷಣೆ ಕೂಗಿದರು.

ಪ್ರತಿಪಕ್ಷಗಳ ಸದಸ್ಯರ ಘೋಷಣೆಗೆ ಪ್ರತಿಕ್ರಿಯಿಸಿದ ಮೋದಿ, ನೀವು ಕೆಸರನ್ನು ಎರಚಿದಷ್ಟೂ ಕಮಲ ಅರಳುತ್ತದೆ ಎಂದು ಹೇಳಿದರು.

ADVERTISEMENT

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.