ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಸಂತ್ರಸ್ತರಾಗಿ ಪರಿಹಾರದ ಶಿಬಿರದಲ್ಲಿ ನೆಲಸಿರುವ ಜನರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಚುರಚಾಂದಪುರದಲ್ಲಿ ಶನಿವಾರ ಮಾತುಕತೆ ನಡೆಸಿದರು
ಚುರಚಾಂದಪುರ/ಇಂಫಾಲ್: ಗಲಭೆ, ಹಿಂಸಾಚಾರವನ್ನು ದೂರವಿಡುವಂತೆ ಮಣಿಪುರದ ವಿವಿಧ ಸಂಘಟನೆಗಳಿಗೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲ ಸಂಘಟನೆಗಳು ಶಾಂತಿ ಮಾರ್ಗ ಕಂಡುಕೊಳ್ಳಬೇಕು ಎಂದು ಶನಿವಾರ ಹೇಳಿದರು.
ಹಿಂಸಾಚಾರದಿಂದ ಸ್ಥಳಾಂತರಗೊಂಡ ಸಂತ್ರಸ್ತರ ಕುಟುಂಬಗಳಿಗೆ 7000 ಹೊಸ ಮನೆಗಳನ್ನು ನಿರ್ಮಿಸಲು ನೆರವು ನೀಡಲಾಗುವುದು
ಇತ್ತೀಚೆಗೆ ₹3000 ಕೋಟಿ ವಿಶೇಷ ಪ್ಯಾಕೇಜ್ ಅನುಮೋದಿಸಲಾಗಿದೆ. ಸಂತ್ರಸ್ತರ ನೆರವಿಗೆ ನಿರ್ದಿಷ್ಟವಾಗಿ ₹500 ಕೋಟಿ ನಿಗದಿಪಡಿಸಲಾಗಿದೆ
ಹಿಂದೆ ದೆಹಲಿಯಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳು ಮಣಿಪುರಕ್ಕೆ ತಲುಪಲು ದಶಕಗಳೇ ಬೇಕಾಗುತ್ತಿತ್ತು. ಆದರೆ ಈಗ ತ್ವರಿತವಾಗಿ ತಲುಪುತ್ತಿವೆ. ಇದರ ಪರಿಣಾಮ ದೇಶದ ಇತರ ಭಾಗಗಳಂತೆ ಮಣಿಪುರ ಸಹ ಪ್ರಗತಿ ಪಥದತ್ತ ಸಾಗಿದೆ
ಹಿಂದೆ ಇಲ್ಲಿನ ಬೆಟ್ಟ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಉತ್ತಮ ಶಾಲೆ ಆಸ್ಪತ್ರೆಗಳು ಕನಸಾಗಿದ್ದವು. ಈಗ ಪರಿಸ್ಥಿತಿ ಬದಲಾಗಿದೆ. ಚುರಚಾಂದಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗಿದೆ
ರಾಜ್ಯದಲ್ಲಿ ಎಂಟು ವರ್ಷಗಳ ಹಿಂದೆ ಕೊಳವೆ ನೀರಿನ ಸಂಪರ್ಕವನ್ನು ಕೇವಲ 30000 ಮನೆಗಳು ಪಡೆದಿದ್ದವು. ಈಗ 3.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ.
ಮಣಿಪುರದ ಹೆಸರಿನಲ್ಲಿ ‘ಮಣಿ’ ಇದೆ. ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಫಲವಾಗಿ ಇದು ಮುಂದಿನ ದಿನಗಳಲ್ಲಿ ಹೊಳೆಯುವ ‘ರತ್ನ’ವಾಗಲಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.