ADVERTISEMENT

VP ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲೇ ಮೋದಿ ಭೇಟಿ ಮಾಡಿದ ಸಿ.ಪಿ.ರಾಧಾಕೃಷ್ಣನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಆಗಸ್ಟ್ 2025, 11:54 IST
Last Updated 18 ಆಗಸ್ಟ್ 2025, 11:54 IST
   

ಬೆಂಗಳೂರು: ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ತಮ್ಮನ್ನು ಘೋಷಣೆ ಮಾಡಿದ ಬೆನ್ನಲ್ಲೇ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರು ಧನ್ಯವಾದ ಸಲ್ಲಿಸಿದರು.

ಎನ್‌ಡಿಎ ಮೈತ್ರಿಕೂಟದ ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಲು ಮತ್ತು ಹಲವು ಮುಖಂಡರ ಭೇಟಿಗಾಗಿ ರಾಧಾಕೃಷ್ಣನ್‌ ಅವರು ಇಲ್ಲಿಗೆ ಆಗಮಿಸಿದ್ದರು.

ರಾಧಾಕೃಷ್ಣನ್‌ ಅವರು ಭೇಟಿಯಾದ ಮರುಕ್ಷಣವೇ ಪ್ರಧಾನಿ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡರು. ‘ ರಾಧಾಕೃಷ್ಣನ್‌ ಅವರಿಗೆ ನನ್ನ ಶುಭಾಶಯ ತಿಳಿಸಿದ್ದೇನೆ. ಅವರ ಸುದೀರ್ಘ ಕಾಲದ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅವರ ಅನುಭವವು ದೇಶವನ್ನು ಇನ್ನಷ್ಟು ಉತ್ಕೃಷ್ಟಗೊಳಿಸಲಿದೆ. ಅದೇ ನಿಸ್ವಾರ್ಥ ಕಾರ್ಯವೈಖರಿ ಮತ್ತು ಪರಿಹಾರ ಮಾರ್ಗಗಳ ಮೂಲಕ ದೇಶಕ್ಕೆ ಅವರು ತಮ್ಮ ಸೇವೆಯನ್ನು ಮುಂದುವರೆಸಲಿ’ ಎಂದು ಮೋದಿ ಹೇಳಿದ್ದಾರೆ.

ADVERTISEMENT

ಮಂಗಳವಾರ ನಡೆಯುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ರಾಧಾಕೃಷ್ಣನ್‌ ಅವರನ್ನು ಸನ್ಮಾನಿಸಲಿದ್ದು, ಆಗಸ್ಟ್ 20ರಂದು ಎನ್‌ಡಿಎ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ದಿನದ ಬೆಳವಣಿಗೆಗಳು: 

* ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿಯಾಗಿ ಶುಭಕೋರಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌

*ಶರದ್ ಪವಾರ್, ಉದ್ಧವ್‌ ಠಾಕ್ರೆ ಭೇಟಿಯಾಗಿ ರಾಧಾಕೃಷ್ಣನ್‌ ಅವರನ್ನು ಬೆಂಬಲಿಸುವಂತೆ ಫಡಣವೀಸ್ ಮನವಿ

* ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ದೂರವಾಣಿ ಕರೆ ಮಾಡಿ, ಬೆಂಬಲಿಸುವಂತೆ ಮನವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.