ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯಿಂದ ಅಜಿತ್ ಡೊಭಾಲ್ ಅವರನ್ನು ತಕ್ಷಣವೇ ತೆಗೆದು ಹಾಕಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
‘ಪೆಗಾಸಸ್ ಪ್ರಕರಣದ ನಂತರ ಡೊಭಾಲ್ ಮತ್ತೊಂದು ಭಯಂಕರ ಪ್ರಮಾದ ಎಸಗಿದ್ದು, ಅಮೆರಿಕ ಶೀಘ್ರವೇ ಬಹಿರಂಗಪಡಿಸಲಿದೆ. ತಕ್ಷಣ ಕ್ರಮ ತೆಗೆದುಕೊಳ್ಳದಿದ್ದರೆ ಈ ವರ್ಷದ ಮಧ್ಯ ದಲ್ಲಿ ಮೋದಿಯೇ ಹುದ್ದೆ ತ್ಯಜಿಸಬೇಕಾಗುತ್ತದೆ’ ಎಂದೂ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.